ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, . 22. ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಡೆದಿದೆ.

ಬಂಧಿತರನ್ನು ಪಿಕಪ್ ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್ ಹಾಗೂ ಪಣಪಿಲದ ಶೈಲೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡವು ಗಸ್ತಿನಲ್ಲಿದ್ದ ವೇಳೆ ಪಡುಕೊಣಾಜೆ ಎಂಬಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಎರಡು ಹಸು ಮತ್ತು ಎರಡು ಕರು ಪತ್ತೆಯಾಗಿವೆ. ಇನ್ನು ಘಟನೆಯಲ್ಲಿ ಗಂಟಾಲ್ಕಟ್ಟೆಯ ಫಾರೂಕ್, ನಿಸಾರ್ ಮತ್ತು ಪಣಪಿಲದ ಹೆರಾಲ್ಡ್ ಫೆರ್ನಾಂಡಿಸ್ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಶಕ್ಕೆ ಪಡೆದ ಹಸುಗಳನ್ನು ಬಜಪೆ ಗೋಶಾಲೆಗೆ ಹಸ್ತಾಂತರ ಮಾಡಲಾಗಿರುವುದಾಗಿ ತಿಳಿದುಬಂದಿದೆ.

Also Read  ಬೆಂಗಳೂರಿನಲ್ಲಿ ಇನ್ನಿಲ್ಲ ಕುಡಿಯುವ ನೀರಿಗೆ ಸಮಸ್ಯೆ ➤ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ

error: Content is protected !!
Scroll to Top