ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ನವೆಂಬರ್ 24ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.


ಪ್ರವಾಸದ ವಿವರ- ನವೆಂಬರ್ 24ರ ಶುಕ್ರವಾರದಂದು ಬೆಳಗ್ಗೆ 8.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ  ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ಮಟ್ಟದ ಈಜುಕೊಳದ ಉದ್ಘಾಟನೆ ಹಾಗೂ ಈಜು ಸ್ಪರ್ಧೆಯನ್ನು ಉದ್ಘಾಟಿಸುವರು. 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ, 2.30ರಿಂದ ಮಂಗಳೂರು ಮಹಾನಗರಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 6.40ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಾಟಿಪಳ್ಳ: ಬ್ಲಡ್ ಹೆಲ್ಪ್ ಕೇರ್ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

error: Content is protected !!
Scroll to Top