ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಹೊಟೇಲ್ ರೂಂ ಒಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ.

ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ. ಇವರು ನ. 15ರಿಂದ ಹೊಟೇಲ್ ರೂಂನಲ್ಲಿ ವಾಸವಿದ್ದರು. ಬುಧವಾರದಂದು ರಾತ್ರಿ ಊಟದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣವೇ ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಒಳಗಿನಿಂದ ಲಾಕ್ ಮಾಡಲಾಗಿದ್ದ ಬಾಗಿಲನ್ನು ತೆರೆದಿದ್ದಾರೆ. ಈ ವೇಳೆ ಯಶ್ ರಾಜ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರೂಂನಲ್ಲಿ ಯಶ್ ರಾಜ್ ಒಬ್ಬಂಟಿಯಾಗಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Also Read  ಆಲಂಕಾರು : ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ➤ ಜನವರಿ 2ರಿಂದ 5ರವರೆಗೆ ರಜತ ಸಂಭ್ರಮ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಾರಂಭ

error: Content is protected !!
Scroll to Top