ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, . 23. ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ನಡೆದಿದೆ.

 

ಮೃತ ಮಹಿಳೆಯನ್ನು ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಎಂದು ಗುರುತಿಸಲಾಗಿದೆ. ಲೀಲಾವತಿಯವರು ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಲೀಲಾವತಿ ಗಾಳಿಗೆ ಹಾರಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾಪು ಸಿಐ ಜಯಶ್ರೀ ಎಂ ಮಾನೆ  ಮತ್ತು ಎಸ್‌ಐ ಅಬ್ದುಲ್ ಖಾದರ್ ಸ್ಥಳಕ್ಕೆ ಭೇಟಿ ನೀಡಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top