ವೇಶ್ಯಾವಾಟಿಕೆ ಅಡ್ಡೆಗೆ ಸಿಸಿಬಿ ಪೊಲೀಸರಿಂದ ದಾಳಿ ► ವೇಶ್ಯೆಯರೊಂದಿಗೆ ಸಿಕ್ಕಿಬಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10. ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ಆರಂಭವಾದೊಡನೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರೋರ್ವರು ವೇಶ್ಯಾವಾಟಿಕೆ ಅಡ್ಡೆಯಲ್ಲಿ ಪೊಲೀಸ್ ಬಲೆಗೆ ಬೀಳುವವುದರ ಮೂಲಕ ಪಕ್ಷಕ್ಕೆ ಮುಜುಗರದ ಪರಿಸ್ಥಿತಿ ತಂದೊಡ್ಡಿದ್ದಾರೆ.

ಬೆಂಗಳೂರಿನ ದೊಡ್ಡ ಬಿದರಕಲ್ಲಿನ ಲಾಡ್ಜ್ ಒಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಕಾಂಗ್ರೆಸ್ ಪಕ್ಷದ ತುಮಕೂರು ಜಿಲ್ಲಾಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ ನಾಲ್ವರು ಸಿಕ್ಕಿಬಿದ್ದಿದ್ದಾರೆನ್ನಲಾಗಿದೆ. ಇಬ್ಬರು ಯುವತಿಯರನ್ನು ರಕ್ಷಿಸಲಾಗಿದ್ದು, ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕರೊಬ್ಬರ ಆಪ್ತರಾಗಿರುವ ರಾಮಕೃಷ್ಣಯ್ಯ ಹಾಗೂ ಇನ್ನೋರ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಪೀಣ್ಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆಂದು ತಿಳಿದುಬಂದಿದೆ.

Also Read  ಆಹಾರ ವ್ಯರ್ಥ ಕಡೆಗೆ ಶೀಘ್ರ ಕಾನೂನು

error: Content is protected !!
Scroll to Top