ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 14. ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರದಂದು ರಾತ್ರಿ 11.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ.


ಮಂಗಳೂರಿನಿಂದ ಬೆಂಗಳೂರಿಗೆ ಡಾಂಬರು ಸಾಗಿಸುತ್ತಿದ್ದ ಲಾರಿ ಉದನೆ ತಲುಪುತ್ತಿದ್ದಂತೆಯೇ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವು ಸಿಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿದಿದ್ದು, ತಕ್ಷಣವೇ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಕಾರ್ಮಿಕರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಲಾರಿ ಭಾಗಶಃ ಸುಟ್ಟು ಹೋಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Also Read  ಕಳೆದ 30 ವರ್ಷಗಳಿಂದ 'ಡಾಮರೀಕರಣ ಭಾಗ್ಯ' ಕಾಣದ ಮರ್ಧಾಳ - ಕೆರ್ಮಾಯಿ ಸಂಪರ್ಕ ರಸ್ತೆ ► ಚುನಾವಣೆ ಬಹಿಷ್ಕಾರದತ್ತ ಊರವರ ಚಿತ್ತ

error: Content is protected !!
Scroll to Top