ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 15. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರ ಎಂಬಲ್ಲಿ ನಡೆದಿದೆ.

ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಕೆಂಪೇಗೌಡರ ಜೀವನಶೈಲಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ➤ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್

error: Content is protected !!
Scroll to Top