ಬಸ್ ಹಾಗೂ ಕಾರು ನಡುವೆ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 19. ಖಾಸಗಿ ಬಸ್‌ ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ, ಬಸ್ಸಿನ ನಿರ್ವಾಹಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡ ಘಟನೆ ಕರಿಯಂಗಳ ಗ್ರಾಮದ ಮಂಗಾಜೆ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಕಾರು ಚಾಲಕ ಹೊನ್ನಯ್ಯ ಪೂಜಾರಿ, ಬಸ್ಸಿನ ನಿರ್ವಾಹಕ ಶ್ರೀಕಾಂತ್‌ ಹಾಗೂ ಪ್ರಯಾಣಿಕೆ ಹೈಡ ಕುಟಿನ್ಹಾ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group