ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗೆ ಸಚಿವ ಗಡ್ಕರಿಯಿಂದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗಳ ಸಹಿತ 13 ಕಾಮಗಾರಿಗಳಿಗೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಇಂದು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ಮಾಡಲಿದ್ದಾರೆ.

ಸಚಿವ ನಿತಿನ್ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ- ಧರ್ಮಸ್ಥಳ-ಪೆರಿಯಶಾಂತಿ ವರೆಗಿನ 614 ಕೋಟಿ ರೂ. ವೆಚ್ಚದ ಸುಮಾರು 28.50 ಕಿ.ಮೀ. ಉದ್ದದ ದ್ವಿಪಥ ರಸ್ತೆ ಹಾಗೂ ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ 344 ಕೋಟಿ ರೂ. ವೆಚ್ಚದ ಸುಮಾರು 11 ಕಿ.ಮೀ ದ್ವಿಪಥ ರಸ್ತೆ ಕಾಮಗಾರಿಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.

error: Content is protected !!
Scroll to Top