ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ನಾಪತ್ತೆಯಾಗಿದ್ದ ಯುವಕನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್ ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಸೋಮವಾರದದು ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ ಪ್ರಯುಕ್ತ ಕಲಶಾಭಿಶೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದನು. ಬಳಿಕ ರಾತ್ರಿ ವೇಳೆ ಮನೆಯಿಂದ ಹೊರಹೋಗಿದ್ದ ಗೌತಮ್ ಮತ್ತೆ ವಾಪಸಾಗದ ಹಿನ್ನೆಲೆ ಮರುದಿನ ಮನೆಯವರು ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದೀಗ ಗೌತಮ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Scroll to Top