ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 24. ಮುಂಬೈಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡು ಮೂಲದ ಕಯ್ಯಾರ್ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕಯ್ಯಾರ್ ಚನ್ನಿಕುಡೇಲ್ ನ ರೂಬನ್ ಚಾರ್ಲ್ಸ್ ಕ್ರಾಸ್ತ (39) ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಉದ್ಯಮ ನಡೆಸುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ರೂಬನ್ ನನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದಾರೆ.

error: Content is protected !!
Scroll to Top