ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕಳೆದ 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮಾದಾಪುರದ ಈರಪ್ಪ ಎಂದು ಗುರುತಿಸಲಾಗಿದೆ. ಈತ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದು, 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

Also Read  ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ

error: Content is protected !!
Scroll to Top