ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು

(ನ್ಯೂಸ್ ಕಡಬ) neskadaba.com ಪುತ್ತೂರು, ಫೆ. 26. ದ್ವಿಚಕ್ರ ವಾಹನ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಭಾನುವಾರದಂದು ರಾತ್ರಿ ನಡೆದಿದೆ.

ಮೃತ ಸವಾರನನ್ನ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್ ರಾಜ(45) ಎಂದು ಗುರುತಿಸಲಾಗಿದೆ. ಸ್ಕೂಟರ್ ಸಹಸವಾರರಾಗಿದ್ದ ಬಿಹಾರ ಮೂಲದ ಸುರೇಂದರ್ (29) ಮತ್ತು ಸನ್ನೀಫ್ (28) ಎಂಬವರು ಗಾಯಗೊಂಡಿದ್ದಾರೆ. ರವಿವಾರದಂದು ರಜೆಯಿದ್ದ ಕಾರಣ ಕ್ಲಿಫರ್ಡ್ ಮೊರಾಸ್ ಅವರು ಅಳಕೆಮಜಲಿನಲ್ಲಿ ಖಾಸಗಿ ಕೆಲಸ ನಿರ್ವಹಿಸಲೆಂದು ಸುರೇಂದರ್ ಮತ್ತು ಸನ್ನೀಫ್ ರನ್ನು ಕರೆಸಿಕೊಂಡಿದ್ದರು. ರಾತ್ರಿ ವೇಳೆ ಅವರಿಬ್ಬರನ್ನು ಅವರು ವಾಸ್ತವ್ಯವಿರುವ ಮುರ ಎಂಬಲ್ಲಿನ ರೂಮ್ ಗೆ ಬಿಡಲೆಂದು ಸ್ಕೂಟರ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಸ್ಕೂಟರ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಮಿನಿ ಬಸ್ ನಡುವೆ ಪೋಳ್ಯ ತಿರುವಿನಲ್ಲಿ ಢಿಕ್ಕಿ ಸಂಭವಿಸಿದೆ. ಇದರಿಂದ ತೀವ್ರ ಗಾಯಗೊಂಡಿದ್ದ ಕ್ಲಿಫರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹ ಸವಾರರಾದ ಸುರೇಂದರ್ ಅವರ ಎಡ ಕಾಲು ಮುರಿತಕ್ಕೊಳಗಾಗಿದ್ದು, ಸನ್ನೀಫ್ ಅವರ ಮುಖಕ್ಕೆ ಗಾಯವಾಗಿದೆ. ಗಾಯಾಳುಗಳಿಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Also Read  ಕಡಬ: ಟೆಂಪೊ - ಬೈಕ್ ಅಪಘಾತದಲ್ಲಿ ಓರ್ವ ಮೃತಪಟ್ಟ ಪ್ರಕರಣ ➤ ಸಹೋದ್ಯೋಗಿ ಕಾರ್ಮಿಕರಿಂದ ಪ್ರತಿಭಟನೆ

error: Content is protected !!
Scroll to Top