ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಪಾಟ್ನಾ, ಫೆ. 27. ಆರ್.ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಈ ಅಪಘಾತವು ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬದಿಯ ಮತ್ತೊಂದು ಕಡೆಯಿಂದ ಬರುತ್ತಿದ್ದ ವಾಹನಕ್ಕೆ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

error: Content is protected !!
Scroll to Top