ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾರ್ಚ್ 1 ಮತ್ತು 2 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾರ್ಚ್ 1 ರಂದು ಶುಕ್ರವಾರ ಸಂಜೆ 5.35 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.45ಕ್ಕೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್‍ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಚ್ 2ರಂದು ಶನಿವಾರ ಬೆಳಗ್ಗೆ 9 ಗಂಟೆಗೆ ಅಡ್ಯಾರ್ ನಲ್ಲಿ ಪಂಚಾಯತ್‍ ರಾಜ್ ಸದಸ್ಯರ ಕ್ರೀಡಾಕೂಟ ಉದ್ಘಾಟನೆ, 11.30 – ಬಂಟ್ವಾಳ ತಾಲೂಕಿನ ನಾವೂರು ಗ್ರಾಮದಲ್ಲಿ ಮೂಡೂರು ಪಡೂರು ಜೋಡುಕರೆ ಕಂಬಳ ಕಾರ್ಯಕ್ರಮ, ಸಂಜೆ 2.30 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top