ಮರ್ಧಾಳ: ಧನಲಕ್ಷ್ಮೀ ಕಾಂಪ್ಲೆಕ್ಸ್ ಮತ್ತು ಧನಲಕ್ಷ್ಮೀ ಜನರಲ್ ಸ್ಟೋರ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಇಲ್ಲಿನ ಮರ್ಧಾಳದ ಹೃದಯ ಭಾಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ನೂತನ ವಾಣಿಜ್ಯ ಸಂಕೀರ್ಣ ಧನಲಕ್ಷ್ಮೀ ಕಾಂಪ್ಲೆಕ್ಸ್ ಹಾಗೂ ಧನಲಕ್ಷ್ಮೀ ಜನರಲ್ ಸ್ಟೋರ್ ಇತ್ತೀಚೆಗೆ ಶುಭಾರಂಭಗೊಂಡಿತು.

ನೂತನ ಸಂಸ್ಥೆಯನ್ನು ಸಾಂತಪ್ಪ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಡಬದ ಸರಸ್ವತಿ ವಿದ್ಯಾಲಯದ ಸಂಚಾಲಕರಾದ ವೆಂಕಟರಮಣ ರಾವ್ ಮಂಕುಡೆ, ಮಾಣಿಪ್ಪಾಡಿ ಕನ್‌ಸ್ಟ್ರಕ್ಷನ್ ಮಾಲಕರಾದ ಕೃಷ್ಣ ಎಂ.ಆರ್, ಶಿವಪ್ರಸಾದ್ ರೈ ಮೈಲೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಾಲಕರಾದ ಬಾಲಕೃಷ್ಣ ರೈ ಹಾಗೂ ಮಕ್ಕಳು ಅತಿಥಿಗಳನ್ನು ಸ್ವಾಗತಿಸಿದರು.

Scroll to Top