ಇಂದು (ಮೇ.08) ವಿಶ್ವ ರೆಡ್ ಕ್ರಾಸ್ ದಿನ ✍🏻 ಡಾ| ಮುರಲೀ ಮೋಹನ್ ಚೂಂತಾರು

ಜಗತ್ತಿನಾದ್ಯಂತ ಮೇ ೮ ರಂದು “ವಿಶ್ವ ರೆಡ್ ಕ್ರಾಸ್ ದಿನ” ಎಂದು ಆಚರಿಸಲಾಗುತ್ತದೆ. ಮಾನವೀಯತೆಯಿಂದ ಶಾಂತಿಯ ಕಡೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುವ ವಿಶ್ವ ರೆಡ್ ಕ್ರಾಸ್ ಸಂಸ್ಥೆಯನ್ನು ಹುಟ್ಟು ಹಾಕಿದ ಮಹಾನ್ ವ್ಯಕ್ತಿ ಶ್ರೀ ಹೆನ್ರಿ ಡ್ಯೂನಾಂಟ್ ಇವರು ಹುಟ್ಟಿದ ದಿನ ಮೇ ೮. ೧೮೫೯ ರ ಜೂನ್ ೨೪ ರಂದು ‘ಸಲ್ಫರಿನೋ’ ಕದನ ದ ಗಾಯಳುಗಳ ಮನ ಕಲುಕುವ ದೃಶ್ಯವನ್ನು ಕಂಡ ಶ್ರೀ ಹೆನ್ರಿ ಡ್ಯೂನಾಂಟ್ ಜನರಿಂದ ಜನರಿಗೆ ನೆರವು ಎಂಬ ಕಲ್ಪನೆಯೊಂದಿಗೆ ೧೮೬೩ ರಲ್ಲಿ ರೆಡ್ ಕ್ರಾಸ್ ಸಂಸ್ಥೆಯನ್ನು ಹುಟ್ಟುಹಾಕಿದರು . ಇಂದು ರೆಡ್ ಕ್ರಾಸ್ ಸಂಸ್ಥೆ ಎನ್ನುವುದು ಜಾಗತೀಕ ಮಟ್ಟದಲ್ಲಿ ಸಾರ್ವಕಾಲಿಕ ಸೇವಾ ಸಂಘಟನೆಯಾಗಿ ಮಾರ್ಪಾಡಾಗಿ, ಯುದ್ಧ ಕಾಲದಲ್ಲಿ ಮತ್ತು ಶಾಂತಿಕಾಲದಲ್ಲಿ ನಿರಂತವಾಗಿ ಶಾಂತಿ ಪ್ರಕ್ರಿಯೆಗಳು ಹಾಗೂ ಚಟುವಟಿಕೆಗಳ ಕಾರ್ಯ ನಿರ್ವಹಿಸುತ್ತಲಿದೆ.

ಭಾರತದಲ್ಲಿ ಕೂಡಾ ೧೯೨೦ ರಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉದಯವಾಯಿತು ಮತ್ತು ಕರ್ನಾಟಕದಲ್ಲಿ ೧೯೨೧ರಲ್ಲಿ ರೆಡ್ ಕ್ರಾಸ್ ಸಂಸ್ಥೆ ಹುಟ್ಟಿಕೊಂಡಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಅತ್ಯಂತ ವಿಶಾಲವಾದ ಹಾಗೂ ದೇಶೀಯ ಮಾನವೀಯ ಸೇವಾ ಸಂಘಟನೆಯಾಗಿದೆ. ಈ ಸಂಸ್ಥೆಯು ವಿಕೋಪಗಳಲ್ಲಿ ಪಾಲ್ಗೊಳ್ಳುವಿಕೆ, ಆರೋಗ್ಯ ಆರೈಕೆ ಸೇವೆಗಳು, ರಕ್ತ ಸಂಗ್ರಹಣ ಸೇವೆಗಳು ಮತ್ತು ಕಿರಿಂiÀi ಹಾಗೂ ಯುವ ರೆಡ್ ಕ್ರಾಸ್ ಚಟುವಟಿಕೆಗಳು, ಇತ್ಯಾದಿ ಸೇವಾ ಕಾರ್ಯಗಳಿಗೆ ಪ್ರಸಿದ್ಧವಾಗಿದೆ . ಒಟ್ಟಿನಲ್ಲಿ ಮೇ ೮ನ್ನು ಪ್ರತಿಯೊಬ್ಬ ನಾಗರೀಕನೂ ತನ್ನ ಜೀವನ ಶೈಲಿಯ ಪುನರ್ ವಿಮರ್ಷೆಮಾಡಿ, ಸಮಾಜದ ನೊಂದವರ, ರೋಗಿಗಳ , ದುರ್ಬಲವರ್ಗದವರ, ಮತ್ತು ಶೋಷಿತರ ಸೇವೆಗೆ ಸಮರ್ಪಿಸಿಕೊಳ್ಳುವ ಒಂದು ಸುದಿನ ಎಂದರೂ ತಪ್ಪಲ್ಲ.

ರೆಡ್ ಕ್ರಾಸ್ ಸಂಸ್ಥೆಯ ಉಗಮ
೧೮೫೯ ರಲ್ಲಿ ಇಟಲಿ, ಫ್ರಾನ್ಸ್ ಹಾಗೂ ಆಸ್ಟೀಯ ದೇಶಗಳ ನಡುವೆ ನಡೆದ ಯುದ್ಧದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸ್ವಯಂಸೇವಾ ಸಂಸ್ಥೆಯಾದ ರೆಡ್‌ಕ್ರಾಸ್ ನ್ನು ೧೮೬೩ ರಲ್ಲಿ ಹೆನ್ರಿ ಡ್ಯೂನಾಂಟ್ ರವರು ಸ್ಥಾಪಿಸಿದರು. ನಂತರ ಇದು ಅಂತರಾಷ್ಟೀಯ ರೆಡ್‌ಕ್ರಾಸ್ ಸಂಸ್ಥೆ, ಅಂತರಾಷ್ಟೀಯ ರೆಡ್ ಕ್ರಾಸ್ ಒಕ್ಕೂಟ ಹಾಗೂ ರಾಷ್ಟೀಯ ರೆಡ್ ಕ್ರಾಸ್ ಸಂಸ್ಥೆಯಾಗಿ ಇಡೀ ಪ್ರಪಂಚದಾದ್ಯಂತ ಸ್ಥಾಪನೆಯಾಯಿತು.
ರೆಡ್ ಕ್ರಾಸ್ ಸಂಸ್ಥೆಯ ಉಗಮ ಮಾನವ ಇತಿಹಾಸದಲ್ಲಿ ಒಂದು ಕುತೂಹಲಕಾರಿ ಅಧ್ಯಾಯ. ಜೂನ್ ೧೮೫೯ರ ೨೪ ರಂದು ನಡೆದ ಅಮಾನವೀಯ , ಭೀಕರ ಯುದ್ಧದ ರಣರಂಗ ರೆಡ್ ಕ್ರಾಸ್ ಉಗಮಕ್ಕೆ ಕಾರಣವಾಯಿತು. ಒಂದೆಡೆ ಫ್ರಾನ್ಸ್ ಮತ್ತು ಇಟಲಿಯ ಸಂಯುಕ್ತ ಸೈನ್ಯ, ಇನ್ನೊಂದೆಡೆ ಆಸ್ಟ್ರಿಯಾ ಸೈನ್ಯ ಆ ರಣರಂಗದಲ್ಲಿ ಇದ್ದವು. ಮೂರು ಲಕ್ಷಕ್ಕೂ ಹೆಚ್ಚಿನ ಸೈನಿಕರು ಆ ರಣರಂಗದಲ್ಲಿ ಕಾದಾಡುತ್ತಿದ್ದರು. ೧೮೫೯ರ ಜೂನ್ ೨೪ ರಂದು “ಸಲ್ಫೆರಿನೋ” ದಲ್ಲಿ ನಡೆದ ಈ ಯುದ್ಧ ೧೫ ಗಂಟೆಗಳ ಕಾಲ ನಡೆದಿತ್ತು. ಯುದ್ಧ ಮುಗಿದಾಗ ರಣರಂಗದ ತುಂಬಾ ಸತ್ತ ಹಾಗೂ ಗಾಯಗೊಂಡ ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಆ ದಿನಗಳಲ್ಲಿ ಚಿಕಿತ್ಸೆಗೆ ಲಭ್ಯವಿದ್ದ ಆಸ್ಪತ್ರೆಗಳು ಹಾಗೂ ವೈದ್ಯರ ಸಂಖ್ಯೆ ಬಹಳ ವಿರಳವಾಗಿತ್ತು. ರಕ್ತಸಿಕ್ತ ರಣರಂಗದಲ್ಲಿ ಸೈನಿಕರು ನೋವಿನಿಂದ ಚೀರಾಡುತ್ತಿದ್ದರೂ, ಸಹಾಯ ಹಸ್ತ ನೀಡಲು ಕೈಗಳೇ ಇರಲಿಲ್ಲ. ಸತ್ತ ಮೃತ ದೇಹಗಳನ್ನು ಸಾಗಿಸಲು ಹಾಗೂ ಬದುಕಿ ಉಳಿದ ಗಾಯಾಳು ಸೈನಿಕರನ್ನು ಉಪಚರಿಸಲು ಮತ್ತು ಚಿಕಿತ್ಸೆ ಮಾಡಲು ವೈದ್ಯಕೀಯ ಸಹಾಯ ಬಹಳ ಸ್ವಲ್ಪ ಪ್ರಮಾಣದಲ್ಲಿ ಇತ್ತು . ಸ್ವಿಟ್ಜರ್ಲೇಂಡ್ ದೇಶದ ವ್ಯಾಪಾರಿ ಹೆನ್ರಿ ಡ್ಯೂನಾಂಟ್ ಎಂಬಾತ ಯುದ್ಧರಂಗದ ಬಳಿ ಹಾದು ಹೋಗುತ್ತಿದ್ದಾಗ ಈ ಭಯಾನಕ ರಣರಂಗದ ರಕ್ತದೋಕುಳಿ, ನೋವು, ಕಿರುಚಾಟ ಕಂಡು ಮಮ್ಮಲ ಮರುಗಿದನು. ಸೂರ್ಯ ಮುಳುಗುವ ಹೊತ್ತಲ್ಲಿ ಅಲ್ಲಿ ಬಂದಿದ್ದ “ಡ್ಸೂನಾಂಟ್” ಮರುದಿನ ಸೂರ್ಯ ಉದಯಿಸುವವರೆಗೆ “ಸ್ಥಳೀಯ ಗ್ರಾಮಸ್ಥರ ಸಹಕಾರ ಪಡೆದು ಗಾಯಾಳುಗಳನ್ನು ಎತ್ತಿನ ಗಾಡಿಗಳಲ್ಲಿ ಹಾಕಿಕೊಂಡು ಕ್ರಾಸ್ಟೆಗ್ಲಿಯನ್ ಪ್ರದೇಶಕ್ಕೆ ಸಾಗಿಸಿದನು. ಯುದ್ಧ ಗಾಯಾಳುಗಳನ್ನು ಖಾಸಗಿ ಮನೆಗಳಲ್ಲಿ, ಚರ್ಚ್ ಗಳಲ್ಲಿ, ಆಶ್ರಮಗಳಲ್ಲಿ, ಮಸೀದಿಗಳಲ್ಲಿ ಸೇನಾ ಸ್ಥಳಗಳಲ್ಲಿ ಇರಿಸಿ ಉಪಚರಿಸಿದನು.
ಹೆನ್ರಿ ಡ್ಸೂನಾಂಟ್ ಒಬ್ಬ ಪಕ್ಕಾ ವ್ಯಾಪಾರಿ, ಆದರೆ ಮಾನವೀಯತೆಯ ಮುಂದೆ ವ್ಯಾಪಾರ ಬುದ್ದಿ ಮಂಕಾಗಿತ್ತು. ಅಲ್ಜೀರಿಯದಲ್ಲಿ ಕಾರ್ನ ಮಿಲ್ ಗಳನ್ನು ಪ್ರಾರಂಭಿಸಲು ಅನುಮತಿ ಪಡೆಯಲು ನೆಪೋಲಿಯನ್ ದೊರೆಯನ್ನು ಕಾಣಲು ಬಂದಿದ್ದನು. ತಾನು ನಡೆಯುತ್ತಾ ಇದ್ದ ದಾರಿಯಲ್ಲಿನ ರಣರಂಗದ , ಮಾರಣಾಂತಿಕ ದೃಶ್ಯವನ್ನು ಕಂಡು ಮಮ್ಮಲ ಮರುಗಿದನು. ಆ ಸೈನಿಕರ ನೋವಿಗೆ ತಕ್ಷಣ ಸ್ವಂದಿಸಿದನು. ಆ ಸೈನಿಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಪೂರಕವಾಗಿ ಸ್ವಯಂಸೇವಕ ತಂಡವನ್ನು ತಯಾರು ಮಾಡಿದನು. ಯಾವುದೇ ದೇಶ, ಜಾತಿ, ಮತ, ಕುಲ, ಗೋತ್ರ, ಬಣ್ಣ, ಧರ್ಮಗಳ ಭೇದ ಮಾಡದೆ ಎಲ್ಲಾ ದೇಶದ ಗಾಯಾಳುಗಳನ್ನು ಉಪಚರಿಸಿ ಮಾನವೀಯತೆಯನ್ನು ಮೆರೆದನು.

Also Read  ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಕಡಬದ ಪ್ರಪ್ರಥಮ ಎಕ್ಸ್‍ರೇ ವಿಭಾಗ ಶುಭಾರಂಭ ➤ ತಜ್ಞ ವೈದ್ಯರ ಭೇಟಿಯ ಜೊತೆಗೆ ಎಕ್ಸ್‍ರೇ ಸೇವೆ ಶ್ಲಾಘನೀಯ: ಸಚಿವ ಎಸ್.ಅಂಗಾರ


ಕಾಲಚಕ್ರ ಉರುಳುತ್ತಿತ್ತು, ಜನ ಎಲ್ಲವನ್ನೂ ಮರೆತರೂ, ಹೆನ್ರಿ ಡ್ಸೂನಾಂಟ್ ಕನಸಲ್ಲೂ ಬೆಚ್ಚಿ ಬೀಳುತ್ತಿದ್ದ. ಯುದ್ಧದ ಭೀಕರತೆ ಹೆನ್ರಿಯ ಮನದಲ್ಲಿ ಆಳವಾಗಿ ಬೇರೂತ್ತಿತ್ತು. ಹಗಲೂ ರಾತ್ರಿ ಯುದ್ಧದ ಬಗ್ಗೆಯೇ ಯೋಚಿಸುತ್ತಿದ್ದ ಆತ, ಇದಕ್ಕೊಂದು ಶಾಶ್ವತ ಪರಿಹಾರ ಪಡೆಯಲೇ ಬೇಕೆಂಬ ದೃಢ ಚಿತ್ತದಿಂದ ಕಾರ್ಯಪ್ರವತ್ತವಾದ. ಯುದ್ಧಕಾಲದಲ್ಲಿ ಮಾನವ ಜನಾಂಗ ಎದುರಿಸುವ ಭಯಂಕರ ಯಾತನೆಯನ್ನು ತಪ್ಪಿಸಲು ಹೆನ್ರಿ ಡ್ಯೂನಾಂಟ್ ತನ್ನದೇ ಆದ ಎರಡು ಅಂಶಗಳನ್ನು ಮನದಟ್ಟು ಮಾಡಿಕೊಂಡ. ಆ ನಿಟ್ಟಿನಲ್ಲಿ ಹೆನ್ರಿ ಡ್ಯೂನಾಂಟ್ “ ದಿ ಮೆಮಾರಿ ಆ¥s಼ï ಸಾಲ್ಫರಿನೋ” ಎಂಬ ಪುಸ್ತಕವನ್ನು ಪ್ರಕಟಿಸಿ, ಅದರ ಪ್ರತಿಗಳನ್ನು ವಿಶ್ವದಾದ್ಯಂತ ಹಂಚಿದ. ಆ ಪುಸ್ತಕದಲ್ಲಿ ಯುದ್ಧ ಕಾಲದಲ್ಲಿ ಮಾನವೀಯತೆಯನ್ನು ಮೆರೆಯಲು ಎರಡು ಕಾರ್ಯಸೂಚಿಯನ್ನು ಜಾರಿಗೆ ತರಬೇಕೆಂದು ಜಗತ್ತಿನ ಎಲ್ಲಾ ರಾಷ್ಟಗಳಿಗೆ ಕರೆ ನೀಡಿದ. ಆ ಎರಡು ಅಂಶಗಳು ಯಾವುದೆಂದರೆ, ಅಂತರಾಷ್ಟೀಯ ಸ್ವಯಂಸೇವಕರ ಸಂಘಟನೆಯನ್ನು ಎಲ್ಲಾ ರಾಷ್ಟಗಳಲ್ಲೂ ಶಾಂತಿಕಾಲದಲ್ಲಿ ಪ್ರತಿಷ್ಠಾಪಿಸಬೆಕು. ಇದರಲ್ಲಿ ಸ್ವಯಂ ಸೇವಕ ತಂಡವು ಯುದ್ಧ ಮುಕ್ತಾಯವಾದ ಬಳಿಕ ಅಲ್ಲಿನ ಗಾಯಾಳುಗಳನ್ನು ಅವರ ಜಾತಿ, ಮತ, ಧರ್ಮ ಮತ್ತು ರಾಷ್ಟಿಯತೆಯನ್ನು ಗಮನಿಸದೇ ಉಪಚರಿಸಬೇಕು. ಗಾಯಾಳು ಸೈನಿಕರನ್ನುಉಪಚರಿಸಲು ಸಾಧ್ಯವಾಗಿಸಲು ರಾಷ್ಟçಗಳು ಗಾಯಾಳು ಸೈನಿಕರನ್ನು, ವೈದ್ಯರನ್ನು ಹಾಗೂ ಇತರ ಸಹಾಯಕರನ್ನು ತಟಸ್ಥರೆಂದು, ಯಾವ ಪಕ್ಷಕ್ಕೂ ಸೇರದವರೆಂದು ಘೋಷಿಸಿ, ಅಂತರಾಷ್ಟಿಯ ಒಪ್ಪಂದಕ್ಕೆ ಸಹಿ ಹಾಕಬೇಕು.


ಈ ಅಧ್ಬುತವಾದ ಪುಸ್ತಕವನ್ನು ಓದಿದ ಬಳಿಕ ಜಿನಿವಾದ ಸಮಾಜಕಲ್ಯಾಣ ಸಂಸ್ಥೆಯೊಂದು, ಹೆನ್ರಿ ಡ್ಯೂನಾಂಟ್‌ನ ಸಂಕಲ್ಪಗಳನ್ನು ಸಾಕಾರಗೊಳಿಸಲು ಸಹಾಯ ಮಾಡಲು ಮುಂದೆ ಬಂದಿತು. ೫ ಮಂದಿಯ ಒಂದು ಸಮಿತಿಯನ್ನು ಮಾಡಿ , ಹೆನ್ರಿ ಡ್ಯೂನಾಂಟ್‌ರವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಯಿತು. ಈ ಸಮಿತಿಯು ಒಬ್ಬ ಸೇನೆಯ ನಿವೃತ್ತ ಕಮಾಂಡರ್, ಒಬ್ಬ ವೈದ್ಯ, ಒಬ್ಬ ಸಮಾಜ ಸೇವಕ, ಒಬ್ಬ ವ್ಯಾಪಾರಿ, ಹಾಗೂ ಮತ್ತೊಬ್ಬ ನಿವೃತ್ತ ಅಧ್ಯಾಪಕರನ್ನು ಒಳಗೊಂಡಿತ್ತು. ಇವರ ಶ್ರಮದ ಫಲವಾಗಿ ೧೮೬೩, ಅಕ್ಟೋಬರ್ ೨೬ ರಂದು ಜಿನೇವಾದಲ್ಲಿ ಅಂತರಾಷ್ಟೀಯ ಸಮ್ಮೇಳನ ನಡೆದು, ೧೬ ರಾಷ್ಟçಗಳ ವಿವಿಧ ಆಮಂತ್ರಿಕರು ಇದರಲ್ಲಿ ಪಾಲ್ಗೊಂಡಿದ್ದರು. “ ಗಾಯಗೊಂಡ ಸೈನಿಕರ ಸಹಕಾರ ಸಂಸ್ಥೆ” ಎಂಬ ಹೆಸರಿನ ಅಂತರಾಷ್ಟಿçÃಯ ಸಂಸ್ಥೆಯನ್ನು ಸ್ಥಾಪಿಸಲು ಈ ಸಮ್ಮೇಳನದಲ್ಲಿ ತೀರ್ಮಾನಿಸಲಾಯಿತು. ಮುಂದೆ ಇದೇ ಸಂಸ್ಥೆ “ ರೆಡ್ ಕ್ರಾಸ್ ಸಂಸ್ಥೆ” ಎಂಬ ಹೆಸರಿನಿಂದ ಕರೆಯಲ್ಪಟ್ಟಿತು. ಹೀಗೆ ಒಬ್ಬ ವ್ಯಾಪಾರಿಯಾಗಿದ್ದ ಹೆನ್ರಿ ಡ್ಯೂನಾಂಟ್ ನ ಹೃದಯ ಅಂತಃಕರಣದ ಮತ್ತು ಪರಿಶ್ರಮದ ಫಲವಾಗಿ ಅಂತರಾಷ್ಟಿಯ ರೆಡ್ ಕ್ರಾಸ್ ಸಂಸ್ಥೆಯ ಉಗಮವಾಯಿತು.
ಜೀನ್ ಹೆನ್ರಿ ಡ್ಯೂನಾಂಟ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ
ಸ್ವಿಜರ್ಲೇಂಡ್ ದೇಶದ ಜಿನೀವಾದಲ್ಲಿ ೧೮೨೮ರ ಮೇ ೮ ರಂದು ಜನಿಸಿದ. ತಂದೆ ಜೀನ್ ಜ್ಯಾಕ್ ಡ್ಯೂನಾಂಟ್ ವ್ಯಾಪಾರಿ ಮತ್ತು ಸಮಾಜ ಸೇವಕ ತಾಯಿ ಬಹಳ ಧಾರ್ಮಿಕ ಭಕ್ತೆ. ಇವರಿಬ್ಬರ ಗುಣ ಮೈಳೈಸಿ ಹೆನ್ರಿ ಡ್ಯೂನಾಂಟ್ ವ್ಯಾಪಾರದ ಜೊತೆಗೆ ಮಾನವೀಯತೆಯನ್ನು ಹಚ್ಚಿಕೊಂಡ. ಎಳೆ ಪ್ರಾಯದಲ್ಲೇ ಬಡವರಿಗೆ, ರೋಗಿಗಳಿಗೆ, ವೃದ್ಧರಿಗೆ ಔಷದ, ಸಹಾಯ, ಆಹಾರ ನೀಡುವುದನ್ನು ರೂಡಿ ಮಾಡಿಕೊಂಡಿದ್ದ. ಕಾಲೇಜು ವಿಧ್ಯಾರ್ಥಿಯಾಗಿದ್ದಾಗಿನಿಂದಲೂ ಡ್ಯೂನಾಂಟ್ ಪ್ರತಿಭಾವಂತನಾಗಿದ್ದ ಜೊತೆಗೆ ಮಾನವೀಯ ಕಳಕಳಿ ಮತ್ತು ಧಾರ್ಮಿಕ ಚರ್ಚೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಮತ್ತು ಒಬ್ಬ ಉತ್ತಮ ಮಾತುಗಾರನಾಗಿದ್ದನು. ೧೮೪೪ “ ವೈ.ಎಂ. ಸಿ.ಎ. ಎಂಬ ಧರ್ಮ ಸಂಸ್ಥೆ ಹುಟ್ಟಿಹಾಕಿ ಬಡವರಿಗೆ, ರೋಗಿಗಳಿಗೆ, ನೊಂದವರಿಗೆ, ಸಾಂತ್ವಾನ ಹೇಳುವಲ್ಲಿ ಹೆಚ್ಚು ಆಸಕ್ತನಾಗಿದ್ದನು. ತನ್ನ ಜೀವನದ ಹೆಚ್ಚಿನ ಸಮಯವನ್ನು ಯುದ್ಧ ಖೈದಿಗಳ ಕಲ್ಯಾಣಕ್ಕಾಗಿ, ಸಮುದ್ರದಲ್ಲಿ ಗಾಯಗೊಂಡ ಜನರಿಗಾಗಿ ಸೇವೆ ಮಾಡುವುದಕ್ಕೆ ತನ್ನ ಜೀವನವನ್ನು ಮುಡಿಪಾಗಿರಿಸಿದನು. ೧೮೫೯ರ “ಸಲ್ರೆರಿನೋ ಯುದ್ಧ” ಡ್ಯೂನಾಂಟ್‌ನ ಜೀವನ ಧೇಯವನ್ನು ಬದಲಾಯಿಸಿತು. ಮೂಲತಃ ವ್ಯಾಪಾರಿಯಾಗಿದ್ದರೂ, ವ್ಯಾವಹಾರಿಕತೆಗಿಂತ ಮಾನವೀಯತೆಗೆ ಹೆಚ್ಚು ಒತ್ತು ನೀಡಿದ ಫಲವಾಗಿಯೇ “ರೆಡ್ ಕ್ರಾಸ್” ಸಂಸ್ಥೆ ಉಗಮಕ್ಕೆ ಪರೋಕ್ಷವಾಗಿ ಕಾರಣೀಭೂತನಾದನು. ೧೯೦೧ರಲ್ಲಿ ಹೆನ್ರಿ ಡ್ಯೂನಾಂಟ್ ವಿಶ್ವದ ಅತ್ಯುನ್ನತ ಗೌರವವಾದ“ನೋಬೆಲ್ ಶಾಂತಿ ಪುರಸ್ಕಾರ” ಪ್ರಪ್ರಥಮವಾಗಿ ದೊರಕಿತು. ರೆಡ್ ಕ್ರಾಸ್ ಸಂಸ್ಥೆಯ ಅಂತರಾಷ್ಟಿಯ ಸಮಿತಿಯು ಹೆನ್ರಿ ಡ್ಯೂನಾಂಟ್ ಬಗ್ಗೆ ಜಿನೀವಾದಿಂದಲೇ ಕಳಿಸಿದ ಸಂದೇಶ ಈ ರೀತಿಯಾಗಿತ್ತು. “ ಇಂಥ ಘನತ್ತರವಾದ ಗೌರವಕ್ಕೆ ನಿಮ್ಮಂತೆ ಪಾತ್ರರಾದವರು ಬೇರೆ ಯಾರೋಬ್ಬರೂ ಇಲ್ಲ. ೪೦ ವರ್ಷಗಳ ಸತತ ಪರಿಶ್ರಮದಿಂದ ಈ ಅಂತರಾಷ್ಟಿಯ ಸಂಘಟನೆಯನ್ನು ಯುದ್ಧರಂಗದಲ್ಲಿನ ಗಾಯಾಳುಗಳ ಪರಿಹಾರಕ್ಕಾಗಿ ನೀವು ಆರಂಭಿಸಿದಿರಿ. ನೀವಿಲ್ಲದಿದ್ದರೆ ೧೯ನೇ ಶತಮಾನದ ಸರ್ವೋಚ್ಚ ಮಾನವೀಯ ಸಾಧನೆಯಾದ ರೆಡ್ ಕ್ರಾಸ್ ಸಂಸ್ಥೆ ಉದಯಿಸುತ್ತಿರಲಿಲ್ಲ”. ತನ್ನ ಜೀವನದ ಕೊನೆಕ್ಷಣದಲ್ಲಿ ಕೂಡ ಹೆನ್ರಿ ಡ್ಯೂನಾಂಟ್ ಬಡರೋಗಿಗಳ ಸೇವೆ ಮಾಡುತ್ತಾ ಆಸ್ಪತ್ರೆಯಲ್ಲಿಯೇ ಇದ್ದ ಹೀಗೆ ಶ್ರೀಮಂತನಾದರೂ ಬಡವರ ಜೊತೆಗೆ ಬದುಕಿದ, ರೆಡ್ ಕ್ರಾಸ್ ಸಂಸ್ಥಾಪಕ ಹೆನ್ರಿ ಡ್ಯೂನಾಂಟ್ ೩೦ನೇ ಅಕ್ಟೋಬರ್ ೧೯೧೦ರಂದು ಹ್ರೆಡನ್ ನಗರದಲ್ಲಿ ಮರಣ ಹೊಂದಿದರು. ಹೆನ್ರಿ ಡ್ಯೂನಾಂಟ್‌ನ ಜನ್ಮದಿನವಾದ ಮೇ ೮ ನ್ನು ಪ್ರತಿ ವರ್ಷ “ವಿಶ್ವ ರೆಡ್ ಕ್ರಾಸ್” ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ. ಹೆನ್ರಿ ಡ್ಯೂನಾಂಟ್ ತನ್ನ ಜೀವನದ ಉದ್ದೇಶವನ್ನು ತುಂಬಾ ಸರಳವಾದ ೩ ಶಬ್ದಗಳಲ್ಲಿ ಬರೆದಿದ್ದಾನೆ. ಜನತೆಯಿಂದ, ಜನತೆಗೆ ನೆರವು ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯಗಳನ್ನು ಈ ಶಬ್ದಗಳೇ ವಿವರಿಸುತ್ತದೆ. ಒಟ್ಟಿನಲ್ಲಿ “ರೆಡ್ ಕ್ರಾಸ್” ಸಂಸ್ಥೆ ತನ್ನ ಸೇವಾ ಕಾರ್ಯಗಳಿಂದ ಜಾಗತಿಕ ಆಶಾಕಿರಣವಾಗಿ ಹೊರಹೊಮ್ಮಿತು. ರೆಡ್ ಕ್ರಾಸ್ ಸಂಸ್ಥೆ ಸಾರ್ವಕಾಲಿಕ ಸೇವಾ ಸಂಸ್ಥೆಯಾಗಿ ಹೊರಹೊಮ್ಮಿ, ಯುದ್ಧಕಾಲದಲ್ಲಿ ಮತ್ತು ಶಾಂತಿಕಾಲದಲ್ಲಿ ನಿರಂತರವಾಗಿ ಶಾಂತಿ ಪ್ರಕ್ರಿಯೆಗಳನ್ನು ನಡೆಸುತ್ತಲೇ ಇದ್ದು ವಿಶ್ವಶಾಂತಿಗೆ ಮುನ್ನುಡಿ ಬರೆಯುತ್ತಿದೆ.

Also Read  ಮಧುರ ಕಂಠದ “ಸುಂದರ”ಚಾ......


ರೆಡ್ ಕ್ರಾಸ್ ಸಂಸ್ಥೆ ಮೂಲ ತತ್ವಗಳು
“ ಮಾನವೀಯತೆಯಿಂದ ಶಾಂತಿಯ ಕಡೆಗೆ ” ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಣೆ ನಡೆಸುವ ರೆಡ್ ಕ್ರಾಸ್ ಸಂಸ್ಥೆಯ ಮೂಲ ಧ್ಯೇಯಗಳನ್ನು ಈ ರೀತಿ ವಿಂಗಡಿಸಲಾಗಿದೆ.
೧.“ ಮಾನವೀಯತೆ ಯುದ್ಧರಂಗದಲ್ಲಿನ ಗಾಯಾಳುಗಳಿಗೆ ತಾರತಮ್ಯವಿಲ್ಲದೇ ಸೇವೆ ಸಲ್ಲಿಸುವ ಉದ್ದೇಶದಿಂದ ರೆಡ್ ಕ್ರಾಸ್ ಸಂಸ್ಥೆ ಜನ್ಮ ತಾಳಿತು. ಮಾನವೀಯ ಸಂಕಟಗಳನ್ನು ಅಂತರಾಷ್ಟಿಯ ವ್ಯಾಪ್ತಿಯಲ್ಲಿ ಸಮರ್ಥವಾಗಿ ತಡೆಗಟ್ಟುವುದು ಅಥವಾ ಉಪಶಮನ ಮಾಡುವುದೇ ಅದರ ಪರಮ ಗುರಿ. ಜೀವನ ಸಂರಕ್ಷಣೆ , ಆರೋಗ್ಯ ಪಾಲನೆ ಹಾಗೂ ಮಾನವನ ಘನತೆ ಕಾಪಾಡುವುದು. ಇವುಗಳು ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯೋದ್ದೇಶಗಳು. ಅದು ಪರಸ್ಪರ ತಿಳುವಳಿಕೆ, ಸ್ನೇಹ, ಸಹಕಾರ ಹಾಗೂ ಶಾಶ್ವತ ಶಾಂತಿ ಇವುಗಳನ್ನು ಜನರಲ್ಲಿ ಅಭಿವೃದ್ಧಿ ಪಡಿಸುತ್ತದೆ.
೨. ನಿಷ್ಪಕ್ಷಪಾತ: ರೆಡ್ ಕ್ರಾಸ್ ಸಂಸ್ಥೆ ವ್ಯಕ್ತಿಯ ರಾಷ್ಟಿಯತೆ , ಜನಾಂಗ , ಧಾರ್ಮಿಕ ಶ್ರದ್ಧೆ, ವರ್ಗ ಅಥವಾ ರಾಜಕೀಯ ಅಭಿಪ್ರಾಯ ಇವುಗಳಿಗೆ ಸಂಭAದಿಸಿದAತೆ ಯಾವುದೇ ಪಕ್ಷಪಾತ ಮಾಡುವುದಿಲ್ಲ.
೩. ತಟಸ್ಥತೆ ಎಲ್ಲರ ವಿಶ್ವಾಸವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ರೆಡ್ ಕ್ರಾಸ್ ಸಂಸ್ಥೆ ಯಾವುದೇ ದ್ವೇಷಗಳಲ್ಲಿ ಭಾಗಿಯಾಗುವುದಿಲ್ಲ ಅಥವಾ ಯಾವುದೇ ರಾಜಕೀಯ, ಜನಾಂಗೀಯ , ಧಾರ್ಮಿಕ ಮತ್ತು ಆದರ್ಶವಾದಗಳ ವಿವಾದ ಪ್ರಸಂಗಗಳಲ್ಲಿ ಪಾಲ್ಗೊಳ್ಳುವುದಿಲ್ಲ.
೪. ಸ್ವಾತಂತ್ರ : ರೆಡ್ ಕ್ರಾಸ್ ಸಂಸ್ಥೆ ಅಂತರಾಷ್ಟಿಯ ಮತ್ತು ಸ್ವತಂತ್ರ ಸಂಘಟನೆಯಾಗಿದೆ. ಯಾವುದೇ ದೇಶದಲ್ಲಿನ ರಾಷ್ಟಿಯ ರೆಡ್ ಕ್ರಾಸ್ ಸಂಸ್ಥೆ ಆ ದೇಶದ ಸಹಾಯಕ ಮಾನವ ಸೇವೆ ಗಳ ಪರಿಹಾರಕಾರಕ ಸಂಘಟನೆಯಾಗಿದ್ದು, ಅದು ತನ್ನದೇ ಆದ ನೀತಿ, ನಿಯಮಗಳಿಗೆ ಒಳಪಟ್ಟ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆ. ಯಾವುದೇ ವಿಪತ್ತಿನಿನ ಸಂದರ್ಭದಲ್ಲಿ ತಾನು ರೂಪಿಸಿದ ನೀತಿ ನಿಯಮಗಳಿಗೆ ಬದ್ಧವಾಗಿ. ಮೂಲತತ್ವಗಳಿಗೆ ದಕ್ಕೆಯಾಗದಂತೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸಮರ್ಥವಾಗಿರುತ್ತದೆ.
೫. ಸ್ವಯಂ ಪ್ರೇರಣ ಸೇವೆಗಳು:
ರೆಡ್ ಕ್ರಾಸ್ ಸಂಸ್ಥೆಯ ಸ್ವಯಂ ಪ್ರೇರಿತ ಪರಿಹಾರಕಾರಕ ಸಂಘಟನೆಯಗಿದ್ದು, ಈ ಸಂಸ್ಥೆಯನ್ನು ಯಾವುದೇ ರೂಪದಲ್ಲಿಯೂ ಲಾಭಗಳಿಕೆಯ ಉದ್ದೇಶದಿಂದ ನಿರ್ಮಿಸಿರುವುದಿಲ್ಲ.
೬. ಏಕತೆ: ಯಾವುದೇ ದೇಶದಲ್ಲಿ ಕೇವಲ ಒಂದೇ ಒಂದು ರಾಷ್ಟಿಯ ರೆಡ್ ಕ್ರಾಸ್ ಸಂಘಟನೆ ಇರುತ್ತದೆ. ಅದು ಎಲ್ಲರಿಗೂ ಮಕ್ತವಾಗಿರುತ್ತದೆ. ಅದು ರಾಷ್ಟçವ್ಯಾಪಿ ತನ್ನ ಮಾನವೀಯ ಸೇವೆಗಳನ್ನು ನೆರವೇರಿಸುತ್ತದೆ.
೭. ವಿಶ್ವವ್ಯಾಪಕತ್ವ ರೆಡ್ ಕ್ರಾಸ್ ಸಂಸ್ಥೆ ವಿಶ್ವವ್ಯಾಪಿ ಸಂಘಟನೆಯಾಗಿದ್ದು, ಎಲ್ಲಾ ಸಂಸ್ಥೆಗಳಿಗೂ ಸಮಾನ ಸ್ಥಾನಮಾನ ಹೊಂದಿದ್ದು, ಇತರರಿಗೆ ಸಹಾಯ ಮಾಡುವಲ್ಲಿನ ಹೊಣೆಗಾರಿಕೆ ಮತ್ತು ಕರ್ತವ್ಯಗಳನ್ನು ಹಂಚಿಕೊಳ್ಳುತ್ತದೆ.
ರೆಡ್ ಕ್ರಾಸ್ ಲಾಂಛನ
ಬಿಳಿ ಹಿನ್ನಲೆಯಲ್ಲಿ ಕೆಂಪು ಕ್ರಾಸ್ ಹೊಂದಿದ ಲಾಂಛನ ರೆಡ್ ಕ್ರಾಸ್ ಸಂಸ್ಥೆಯ ಸಂಕೇತ ಚಿಹ್ನೆ. ಕ್ರಾಸ್‌ನ ಎಲ್ಲಾ ಬಾಹುಗಳೂ ಪರಸ್ಪರ ಸಮವಾಗಿವೆ.
ಈ ಚಿಹ್ನೆಯನ್ನು ಯುದ್ಧ ತಟಸ್ಥ ಸಂಕೇತವೆಂದು ಸಾರ್ವತ್ರಿಕವಾಗಿ ಗುರುತಿಸಲಾಗುತ್ತದೆ. ವೈದ್ಯಕೀಯ ಸೇವೆಗಾಗಿ ಬಳಸುವ ಉಪಕರಣಗಳ ಮೇಲೆ ಮತ್ತು ಧ್ವಜದ ಮೇಲೆ ಈ ಲಾಂಛನವನ್ನು ಬಳಸಬಹುದಾಗಿದೆ. ಯುದ್ಧಕಾಲದಲ್ಲಿ, ಸೇನಾ ದಂಗೆಯ ಸಮಯದಲ್ಲಿ, ಅಗತ್ಯವಿರುವ ಸೇವೆ, ಉಪಕಾರ ಮತ್ತು ತುರ್ತು ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸುವಾಗ , ಈ ಸೇವಾ ಕಾರ್ಯದಲ್ಲಿ ತೊಡಗಿರುವರು. ಯುದ್ಧದಿಂದ ಹೊರತಾರವರು ಎಂಬ ಸಂಕೇತ, ಈ ಲಾಂಛನದಿಂದ ಸೂಚಿಸಲಾಗುತ್ತದೆ. ಒಟ್ಟಿನಲ್ಲಿ ತುರ್ತು ಅವಘಡದ ಸಮಯದಲ್ಲಿ ಮಾನವೀಯ ಮತ್ತು ಪರಿಹಾರಕಾರಕ ಸೇವೆ ನೀಡುವ ರೆಡ್ ಕ್ರಾಸ್ ಸಂಸ್ಥೆಯ ಸ್ವಯಂ ಸೇವಕರು ಈ ಲಾಂಛನವನ್ನು ಬಳಸಬಹುದು. ರೆಡ್ ಕ್ರಾಸ್ ಸಂಘಟನೆಯ ಚಟುವಟಿಕೆಗಳನ್ನು ಯುದ್ಧಕಾಲದ ಚಟುವಟಿಕೆ ಮತ್ತು ಶಾಂತಿ ಕಾಲದ ಚಟುವಟಿಕೆ ಎಂದು ವಿಂಗಡಿಸಲಾಗುತ್ತದೆ. ಶಾಂತಿ ಸಮಯದ ಚಟುವಟಿಕೆಗಳಾದ, ಮಾನವೀಯ ತತ್ವ ಮತ್ತು ಮೌಲ್ಯಗಳನ್ನು ಬೆಳೆಸುವುದು ಜನರ ಆರೋಗ್ಯ ವೃದ್ಧಿಸುವ ಕಾರ್ಯ ನಿರ್ವಹಿಸುವುದು, ಪ್ರಾಕೃತಿಕ ವಿಕೋಪಗಳ ಸಮಯದಲ್ಲಿ ಮಾನವೀಯ ನೆರವು ನೀಡುವುದು, ಆರೋಗ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು ಮತ್ತು ಸಮಾಜದ ಸ್ಥಾನವನ್ನು ಹೆಚ್ಚಿಸುವ ಕಾರ್ಯ ಚಟುವಟಿಕೆಗಳಿಗೆ ಒತ್ತು ನೀಡುವುದು ಎಂಬುದಾಗಿ ವಿಂಗಡಿಸಲಾಗಿದೆ. “ಮಾನವೀಯತೆಯಿಂದ ಶಾಂತಿಯ ಕಡೆಗೆ” ಎಂಬ ಧ್ಯೇಯ ವಾಕ್ಯದಿಂದ ಜಗತ್ತಿನಾದ್ಯಂತ ಕಾರ್ಯವ್ಯಾಪ್ತಿ ಹೊಂದಿರುವ ರೆಡ್ ಕ್ರಾಸ್ ಸಂಸ್ಥೆ, ತನ್ನ ಸಂಸ್ಥಾಪಕ ಹೆನ್ರಿ ಡ್ಯೂನಾಂಟ್ ನನ್ನು ಸ್ಮರಿಸುವ ಉದ್ದೇಶಕ್ಕಾಗಿಯೇ ಮೇ ೮ನ್ನು ಅಂತರಾಷ್ಟಿçÃಯ ರೆಡ್ ಕ್ರಾಸ್ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ. ನಾವೆಲ್ಲಾ ಸೇರಿ ದೇಶ, ಜಾತಿ ಮತ, ಜನಾಂಗ, ಕುಲ, ಗೋತ್ರ, ವರ್ಣ ಬೇಧಗಳನ್ನು ಮೆಟ್ಟಿ ನಿಂತು, ವಿಶ್ವ ಭಾತೃತ್ವದ ಮತ್ತು ವಿಶ್ವ ಶಾಂತಿಯ ಸಂದೇಶವನ್ನು ಜಗತ್ತಿಗೆ ಸಾರಿದಲ್ಲಿ, ಅದುವೇ ಆ ಮಹಾನ್ ಜೇತನಕ್ಕೆ ನೀಡುವ ಬಹುದೊಡ್ಡ ಗೌರವ ಎಂದರೂ ಅತಿಶಯೋಕ್ತಿಯಲ್ಲ.

Also Read  ಶೀಘ್ರ ವಿವಾಹದ ವಿಶೇಷ ಪರಿಹಾರ

 ಡಾ|| ಮುರಲಿ ಮೋಹನ್ ಚೂಂತಾರು
ಮಾಜಿ ಸಭಾಪತಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು
ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮಂಗಳೂರು

error: Content is protected !!
Scroll to Top