ಬೆಳಗಾವಿಯಲ್ಲಿ ರಸ್ತೆ ಅಪಘಾತ – ತಮಿಳು ಕಾರ್ಮಿಕ ಮುಖಂಡ, ಕಾಂಗ್ರೆಸ್ ನಾಯಕ ಶಿವಕುಮಾರ್ ಕೌಡಿಚ್ಚಾರ್ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.10. ತಮಿಳು ಕಾರ್ಮಿಕ ಮುಖಂಡ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಇಂದು ಬೆಳಗಾವಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ತುರ್ತು ಕೆಲಸದ ನಿಮಿತ್ತ ಬೆಳಗಾವಿಗೆ ತೆರಳಿದ್ದ ಶಿವಕುಮಾರ್, ಬೆಳಗಾವಿಯ ಖಾನಪುರ ಎಂಬಲ್ಲಿ ಇವರು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ತಮಿಳು ಮುಖಂಡರಾಗಿ ಕಾಂಗ್ರೆಸ್ ಕಾರ್ಮಿಕ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಇವರ ಅಗಲಿಕೆಯು ಇದೀಗ ತಮಿಳು ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.

Also Read  ಸುಳ್ಯ: ಸಾಮಾಜಿಕ ಧುರೀಣ ಟಿ.ಎಮ್.ಶಹೀದ್ ರವರ 50 ನೇ ಸುವರ್ಣ ಸಂಭ್ರಮ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ

error: Content is protected !!
Scroll to Top