ಕಲ್ಲು ಸಾಗಾಟದ ಟಿಪ್ಪರ್ ಪಲ್ಟಿ – ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರ್ಕಳ, ಮೇ.19. ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಪಲ್ಟಿಯಾದ ಒರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿ ಕರಿಯಪ್ಪ(26) ಮತ್ತು ನರಿಯಪ್ಪ(27) ಎಂದು ಗುರುತಿಸಲಾಗಿದೆ. ಕಾರ್ಕಳ ನಿಟ್ಟೆ ಬ್ರಾಹ್ಮರಿ ಕ್ರಾಸ್ ಸಮೀಪ ಟಿಪ್ಪರ್ ನಲ್ಲಿ ಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಲ್ಲು ಹೇರಿಕೊಂಡು ಹೋಗುತ್ತಿದ್ದ ಟಿಪ್ಪರ್ ಕೋರೆಯ ಪಕ್ಕದ ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಈ ವೇಳೆ ಕಾರ್ಮಿಕರು ಚಕ್ರದ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕೊನೆಗೂ ಜೈಲಿನಿಂದ ಹೊರಬಂದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ➤ 145 ದಿನಗಳ ಜೈಲುವಾಸ ಅಂತ್ಯ

error: Content is protected !!
Scroll to Top