ಮಂಗಳೂರು: ಮನೆ ಮೇಲೆ ಕುಸಿದ ಕಾಂಪೌಂಡ್ ಗೋಡೆ – ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.26. ಕಾಂಪೌಂಡ್ ಗೋಡೆಯೊಂದು ಮನೆ ಮೇಲೆ ಉರುಳಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಮೃತಪಟ್ಟ ದಾರುಣ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.

ಮೃತರನ್ನು ಮದನಿನಗರ ರಿಹಾನ ಮಂಝಿಲ್ ನಿವಾಸಿ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಎಂದು ಗುರುತಿಸಲಾಗಿದೆ. ಯಾಸಿರ್ ಮಂಗಳೂರಿನ ಬಂದರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗಿನ ಜಾವ ಅಸುನೀಗಿದ್ದಾರೆ‌. ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಹಾಗೂ ಎರಡು ಅಡಿಕೆ ಮರಗಳು ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿವೆ. ಮೂರು ಗಂಟೆಗಳ ಕಾರ್ಯಾಚರಣೆಯ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ, ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ.

Also Read  ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಓರ್ವನ ಬಂಧನ, 4 ಕರು, 40 ಕೆಜಿ ದನದ ಮಾಂಸ ವಶಕ್ಕೆ

error: Content is protected !!
Scroll to Top