ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20. ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಎಂದು ಗುರುತಿಸಲಾಗಿದೆ.


ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

error: Content is protected !!

Join the Group

Join WhatsApp Group