*ವಾಲ್ಮೀಕಿ ನಿಗಮ ಹಗರಣ ನಾಗೇಂದ್ರ ಗೆ ಆ. 3ರವರೆಗೆ ನ್ಯಾಯಾಂಗ ಬಂಧನ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3 ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

ನಾಗೇಂದ್ರ ಅವರ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಇನ್ನು ಹಗರಣ ಸಂಬಂಧಪಟ್ಟಂತೆ ಸತ್ಯನಾರಾಯಣ ವರ್ಮನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಪ್ರಸ್ತುತ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಇಡಿ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಸತ್ಯನಾರಾಯಣ ವರ್ಮನನ್ನು ವಿಚಾರಣೆಗೆ ಒಳಪಡಿಸಿದ್ದರು.

 

 

Scroll to Top