ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್  ವಿದ್ಯಾರ್ಥಿಗಳು ಗಂಭೀರ !

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.22. ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಘಟನೆ ವರದಿಯಾಗಿದೆ. ಖಾಸಗಿ ಬಸ್ಸು ಶಿವಮೊಗ್ಗದಿಂದ ಬೈಂದೂರಿಗೆ ಬರುತ್ತಿತ್ತು. ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಚರಂಡಿಗೆ ಇಳಿದು ಓರೆಯಾಗಿ ಮರಕ್ಕೆ ತಾಗಿ ನಿಂತಿದೆ.

ಬಸ್ಸಿನಲ್ಲಿ ಕೊಲ್ಲೂರು ಮೂಕಾಂಬಿಕ ಹೈಸ್ಕೂಲ್ ನ 6 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

Also Read  ಇಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ

error: Content is protected !!
Scroll to Top