ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.30. ಪೊಲೀಸರು ಮನೆಗೆ ನುಗ್ಗಿ ವಿನಾಕಾರಣ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಈಶ್ವರಮಂಗಲ ಪಂಚೋಡಿಯಲ್ಲಿ ನಡೆದಿದೆ. ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.


ರಾತ್ರಿ 11 ಗಂಟೆ ಸುಮಾರಿಗೆ ತಾನು ಮನೆಯಲ್ಲಿ ಮಲಗಿದ್ದಾಗ ಬಾಗಿಲು ತಟ್ಟುವ ಶಬ್ದ ಕೇಳಿಸಿತು. ಬಾಗಿಲು ತೆರೆದಾಗ ನಾಲ್ವರು ಪೊಲೀಸರು ಮನೆಯಲ್ಲಿ ಬೇರೆ ಯಾರಾದರೂ ಇದ್ದಾರೆಯೇ ಎಂದು ಕೇಳಿದರು. ಬಳಿಕ ತನ್ನನ್ನು ಹೊರಕ್ಕೆ ಎಳೆದು ನಾಲ್ವರು ಪೊಲೀಸರು ವಿನಾಕರಣ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

error: Content is protected !!

Join the Group

Join WhatsApp Group