ಗೋಳಿತೊಟ್ಟು: ಕಾರು – ಟಿಪ್ಪರ್ ಢಿಕ್ಕಿ ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.19. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಕಾರು ಹಾಗೆಯೇ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ.

ಗಾಯಾಳುವನ್ನು ಕಾರು ಚಾಲಕ ಸ್ಥಳೀಯ ನಿವಾಸಿ ಅಣ್ಣಿ ಗೌಡ ಎಂಬವರ ಪುತ್ರ ಯಶೋಧರ ಗೌಡ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿಯಿಂದ ನೆಲೆಯಾಗಿದೆ ಕಡೆಗೆ ತೆರಳುತ್ತಿದ್ದ ಮರಳು ಸಾಗಾಟದ ಟಿಪ್ಪರ್ ವಿರುದ್ಧ ದಿಕ್ಕಿನಿಂದ ಸಾಗಿ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರಿಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ರಸ್ತೆಯಲ್ಲಿ ನಡೆಯುತ್ತಿದ್ದವರ ಮೇಲೆ ಹೆಜ್ಜೇನು ದಾಳಿ..! ➤ 8 ಮಂದಿ ಆಸ್ಪತ್ರೆಗೆ ದಾಖಲು

error: Content is protected !!
Scroll to Top