ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿ ಮಾಡಿ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ ಎನ್ನಲಾಗಿದೆ.


ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Also Read  ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ

error: Content is protected !!
Scroll to Top