‘ಇಂಧನ ಅಭಿವೃದ್ಧಿ ನಮ್ಮ ಧ್ಯೇಯ’          ಪ್ರಲ್ಹಾದ್ ಜೋಶಿ ಘೋಷಣೆ       

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ಅಭಿವೃದ್ಧಿ ಹೊಂದಿದ ಭಾರತ ನಮ್ಮ ಧ್ಯೇಯ, ಇಂಧನ ಅಭಿವೃದ್ಧಿ ನಮ್ಮ ಧ್ಯೇಯ ಎಂದು ಕೇಂದ್ರ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಘೊಷಿಸಿದ್ದಾರೆ.ಅವರು ಇಂದು ರಾಜ್ಯಸಭೆಯಲ್ಲಿ ಇಂಧನ ಸಚಿವಾಲಯದ ಕಾರ್ಯವನ್ನು ಎತ್ತಿ ತೋರಿಸಿದ್ದಾರೆ. ನವೀಕರಿಸಬಹುದಾದ ಇಂಧನವು ಕೇವಲ ಒಂದು ಆಯ್ಕೆಯಲ್ಲ, ಅದು ರಾಷ್ಟ್ರದ ಸ್ಥಿರತೆಗೆ ಅವಶ್ಯಕವಾಗಿದೆ. ಇದು ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಕಾರಣವಾಗುತ್ತದೆ. ವಿಶ್ವದ ದೊಡ್ಡ ಆರ್ಥಿಕತೆ ಹೊಂದಿರುವ ಎಲ್ಲಾ ದೇಶಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹೀಗಾಗಿ, ಇದಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Also Read  ಕೇಂದ್ರದಿಂದ ‘ಪದ್ಮ ಪ್ರಶಸ್ತಿ’ ಘೋಷಣೆ ➤ 6 ಕನ್ನಡಿಗರು ಸೇರಿ 106 ಸಾಧಕರಿಗೆ ಗೌರವ

ಇಂದು ಭಾರತವು ಆರ್‌ಇ ಅಳವಡಿಕೆಯಲ್ಲಿ ಜಾಗತಿಕವಾಗಿ ನಾಲ್ಕನೇ ಸ್ಥಾನವನ್ನು ಸಾಧಿಸಿದೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

error: Content is protected !!
Scroll to Top