2024ರ ‘ಕಲ್ಲಚ್ಚು ಪ್ರಶಸ್ತಿ’ಗೆ ಡಾ.ನಾಗೇಶ್ ಪ್ರಭು ಆಯ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.08. ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿಯಲ್ಲಿ ಹಿರಿಯ ಪತ್ರಕರ್ತರು ಮತ್ತು ಲೇಖಕರಾಗಿರುವ ಡಾ. ನಾಗೇಶ್ ಪ್ರಭು ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 15ನೇ ಆವೃತ್ತಿಯ 2024ರ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ”ಗೆ ಆಯ್ಕೆ ಆಗಿದ್ದು ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಗಣ್ಯ ಆತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದೆಂದು ಪ್ರಕಾಶನದ ಮುಖ್ಯಸ್ಥ ಸಾಹಿತಿ ಮಹೇಶ ಆರ್. ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ, ಡಾ ನಾಗೇಶ್ ಪ್ರಭು “ದಿ ಹಿಂದೂ” ಪತ್ರಿಕೆಯ ಬೆಂಗಳೂರು ಕಛೇರಿಯಲ್ಲಿ ಹಿರಿಯ ಉಪ ಸಂಪಾದಕರಾಗಿದ್ದು ಈವರೆಗೆ “ರಿಫ್ಲೆಕ್ಟಿವ್ ಶಾಡೋಸ್: ಪೊಲಿಟಿಕಲ್ ಎಕಾನಮಿ ಆಫ್ ವರ್ಲ್ಡ್ ಬ್ಯಾಂಕ್ ಲೆಂಡಿಂಗ್ ಟು ಇಂಡಿಯಾ” , “ಮಧ್ಯಮ ವರ್ಗ, ಮಾಧ್ಯಮ ಮತ್ತು ಮೋದಿ: ದಿ ಮೇಕಿಂಗ್ ಆಫ್ ಎ ನ್ಯೂ ಎಲೆಕ್ಟೋರಲ್ ಪಾಲಿಟಿಕ್ಸ್” ಮತ್ತು “ಧರ್ಮಸ್ಥಳ: ಅಭಿವೃದ್ಧಿಯ ಮಂತ್ರ” ಎಂಬ ಮೂರು ಪ್ರಮುಖ ಇಂಗ್ಲಿಷ್ ಪುಸ್ತಕಗಳನ್ನು ಬರೆದು ಪ್ರಕಟಿಸಿರುವರು.

 

Scroll to Top