ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ                ಹೈಕೋರ್ಟ್ ಗೆ ವರದಿ ಸಲ್ಲಿಕೆ                  

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.08. ಜೈಲೂಟ ರುಚಿಸುತ್ತಿಲ್ಲ, ತೂಕ ಕಳೆದುಕೊಳ್ಳುತ್ತಿದ್ದೇನೆ, ಮನೆಯಿಂದ ಊಟ, ಹಾಸಿಗೆ ತರಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಮಾಡಿದ್ದ ಮನವಿಗೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ.

ನಟ ದರ್ಶನ್ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಮನೆ ಊಟದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಈ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಅರ್ಜಿ ಸಲ್ಲಿಸುವಂತೆಯೂ ನಟ ದರ್ಶನ್ ಪರ ವಕೀಲರಿಗೆ ಸೂಚಿಸಿ, ಆಗಸ್ಟ್.20ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿತ್ತು.

Also Read  ಬಂಟ್ವಾಳ: ಮದ್ಯ ಸೇವಿಸಿ ಗಂಡ - ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ

 

error: Content is protected !!
Scroll to Top