ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ ಎಂಬವರು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿದ್ದು ಅವಿವಾಹಿತರಾಗಿದ್ದರು.


ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನೆಗೆ ಹೋಗಿ ಬರುತ್ತಿದ್ದರು.


ನಾಗರ ಪಂಚಮಿಯ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್ ಆಚಾರ್ಯರವರು ಫೋನ್ ಮಾಡಿದ್ದು ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಅವರು ಅಣ್ಣನ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಮನೆಯ ಒಳಗಿನಿಂದ ದುರ್ವಾಸನೆ ಬರುತ್ತಿದೆ ಎಂದು ತಿಳಿಸಿದ್ದು ಸಂತೋಷ್ ಆಚಾರ್ಯ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ.

error: Content is protected !!

Join the Group

Join WhatsApp Group