ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ವಿತ್.ಪಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 14. ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜೈಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ರಾಮಮೂರ್ತಿ ನಗರ ಬೆಂಗಳೂರು ಇಲ್ಲಿ ನಡೆದ ಪ್ರಾಂತೀಯ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬದ 10ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್.ಪಿ. (ಕಿಶೋರ ವರ್ಗದ -75 ಕೆಜಿ ) ವಿಭಾಗದಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

ಬಾಲವರ್ಗ ಬಾಲಕಿಯರ-30 ಕೆಜಿ ವಿಭಾಗ ಕರಾಟೆ ಸ್ಪರ್ಧೆಯಲ್ಲಿ ಕೀರ್ತಿ ಜೆ.ರೈ ಎಂಟನೇ ತರಗತಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿರುತ್ತಾರೆ.

error: Content is protected !!

Join the Group

Join WhatsApp Group