ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ- ಸಚಿವ ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14. ನುಡಿದಂತೆ ನಡೆದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರವು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ ಒಂದು ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಹಣದ ಹರಿವು ನಿರಂತರವಾಗಿದ್ದು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದು ರಾಜ್ಯದ ಪ್ರಗತಿಗೂ ಪರೋಕ್ಷವಾಗಿ ಪ್ರಯೋಜನವಾಗುತ್ತಿದೆ. ಹೀಗಾಗಿ ಗ್ಯಾರಂಟಿ ಯೋಜನೆಯಲ್ಲಿ ಸದ್ಯ ಯಾವುದೇ ಬದಲಾವಣೆ ಇಲ್ಲದೇ ಪ್ರಸಕ್ತ ಸ್ವರೂಪದಲ್ಲಿ ಮುಂದುವರಿಯುತ್ತದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬಡವರು, ದುರ್ಬಲರು, ವಂಚಿತರು ಹಾಗೂ ಶೋಷಿತರ ಪರವಾಗಿ ನಿಂತಿದೆ. ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ, ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿ ಯೋಜನೆ ಮುಂದುವರೆಯುವುದಾಗಿ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದು ಅದರಂತೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

error: Content is protected !!

Join the Group

Join WhatsApp Group