“ಚಾಮುಂಡಿ ಬೆಟ್ಟ ಪ್ರಾಧಿಕಾರದ ರಚನೆಗೆ ಕೋರ್ಟ್ ತಡೆಯಾಜ್ಞೆ” ಮೈಸೂರು ಒಡೆಯ ಯದುವೀರ್ ಹೇಳಿಕೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 15.  ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರದ ರಚನೆ ಅಗತ್ಯವಿಲ್ಲ ಎಂದು ಮೈಸೂರು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ಸರ್ಕಾರ ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು ಎನ್ನಲಾಗಿದೆ.

Also Read  ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ

 

error: Content is protected !!
Scroll to Top