ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 16. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ದಿನೇ ದಿನೇ ತಾಂಡವವಾಡುತ್ತಿದ್ದು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವುದಾಗಿ ವರದಿಯಾಗಿದೆ.

 

ಮಂಡ್ಯದ ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದಾಗಿ ತಿಳಿದು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವುದಾಗಿ ವರದಿಯಾಗಿದೆ. ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಡಿಹೆಚ್ಒ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಭ್ರೂಣ ಹತ್ಯೆ ಕಿಟ್, ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ. ಅಲ್ಲದೇ ದಾಳಿ ನಡೆಸುತ್ತಿದ್ದಂತೆಯೇ ಸ್ಕ್ಯಾನಿಂಗ್ ಮಾಡುತ್ತಿದ್ದ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಮನೆ ಮಾಲೀಕ, ಆರೋಗ್ಯ ಇಲಾಖೆಯ ಗ್ರೂಪ್ ಡಿ ನೌಕರೆ ಹಾಗೂ ಗರ್ಭಿಣಿಯ ಪತಿ ಸೇರಿ ಮೂವರನ್ನು ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ.

error: Content is protected !!

Join the Group

Join WhatsApp Group