ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಕಳೆದ ವಾರವಷ್ಟೇ ರಾಜ್ಯ ರಾಜಕಾರಣದಲ್ಲಿ ಸಿಎಂ ವಿರುದ್ದ ಬಹಳಷ್ಟು ಸದ್ದು ಮಾಡಿದ್ದ ಮುಡಾ ಕೇಸ್ಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ದೊರೆತಿರುವುದಾಗಿ ಮೂಲಗಳು ವರದಿ ಮಾಡಿವೆ.

 

ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ಚಂದ್ಗೆಹಲೋಟ್ಗ್ರೀನ್ಸಿಗ್ನಲ್ನೀಡಿದ್ದಾರೆ. ಕುರಿತ ಆದೇಶವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದಾಗಿ ತಿಳಿದುಬಂದಿದೆ.

Scroll to Top