ರಾಜ್ಯಪಾಲರಿಂದ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಗ್ರೀನ್ ಸಿಗ್ನಲ್ ಸಿಎಂ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ತುರ್ತು ಸಚಿವ ಸಂಪುಟ ಸಭೆ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಇಂದು ಸಂಜೆ 5 ಗಂಟೆಗೆ ಕರೆಯಲಾಗಿದ್ದ ತುರ್ತು ಸಚಿವ ಸಂಪುಟದ ವಿಶೇಷ ಸಭೆಯನ್ನು ರದ್ದುಗೊಳಿಸಲಾಗಿದೆ.

ರಾಜ್ಯಪಾಲರ ನಡೆಯ ವಿರುದ್ದ ಈಗಾಗಲೇ ಕಾನೂನು ಹೋರಾಟದ ಸುಳಿವು ನೀಡಿರುವ ರಾಜ್ಯ ಸರಕಾರ, ಕೇರಳ ಮಾದರಿಯಲ್ಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳುವ ಸಾಧ್ಯತೆಗಳಿವೆ.

error: Content is protected !!

Join the Group

Join WhatsApp Group