ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 17. ಇಲ್ಲಿನ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ನೆರವೇರಿಸಿ ಭಕ್ತರಿಂದ ಹೆಚ್ಚಿನ ದಕ್ಷಿಣೆಗೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿ ದೇವಳದ ಅರ್ಚಕ ಶಿವ ಪ್ರಕಾಶ್ ಪಾಂಡೇಲು ಎಂಬವರನ್ನು ಅಮಾನತುಗೊಳಿಸಿದ ಕುರಿತು ವರದಿಯಾಗಿದೆ.

ಇತ್ತೀಚಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶದ ಭಕ್ತರ ತಂಡವೊಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿಕೊಂಡು ತಮ್ಮ ಇಷ್ಟಾರ್ಥ ದಕ್ಷಿಣೆಯನ್ನೂ ಅರ್ಚಕರಿಗೆ ನೀಡಿದ್ದಾರೆ. ಆದರೆ ಭಕ್ತರು ನೀಡಿರುವ ದಕ್ಷಿಣೆ ಕಡಿಮೆಯಾಯಿತೆಂದು ಸಿಟ್ಟಿಗೆದ್ದ ಅರ್ಚಕ ಭಕ್ತರು ನೀಡಿದ ದಕ್ಷಿಣೆಯನ್ನು ದೂರ ತಳ್ಳಿದ್ದಾರೆ, ಇದರಿಂದ ಮನನೊಂದ ಭಕ್ತರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು. ಇತ್ತ ದೂರು ಸ್ವೀಕರಿಸಿದ ಅಧಿಕಾರಿಗಳು ಅರ್ಚಕರ ವಿರುದ್ಧ ಈ ಹಿಂದೆಯೂ ಇಂತಹ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group