4 ಗ್ರಾಮ ಪಂಚಾಯತ್ ಗಳು: BBMP ವ್ಯಾಪ್ತಿಗೆ ತರುವಂತೆ ಮನವಿ                                                          

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮೈಸೂರು ರಸ್ತೆಯ ಬಿಡದಿ ಮತ್ತು ಕೆಂಗೇರಿ ನಡುವೆ ಇರುವ ಕುಂಬಳಗೋಡು ಗ್ರಾಮ ಪಂಚಾಯಿತಿ, ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಶಾಂತಿಪುರ ಗ್ರಾಮ ಪಂಚಾಯಿತಿ, ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯಿತಿ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿಗಳು ಬಿಬಿಎಂಪಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ ಎಂದು ಪಾಲಿಕೆ ಮೂಲಗಳು ವರದಿ ತಿಳಿಸಿದೆ.

ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್‌ ಅವರು ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಕುಂಬಳಗೋಡು ಗ್ರಾಮ ಪಂಚಾಯತ್ ನ್ನು ಪಾಲಿಕೆ ವ್ಯಾಪ್ತಿಗೆ ತರುವಂತೆ ಮನವಿ ಮಾಡಿದ್ದಾರೆ ಎಂದು ಬಿಬಿಎಂಪಿ ಪುನರ್‌ರಚನಾ ಸಮಿತಿಯ ಮೂಲಗಳು ತಿಳಿಸಿವೆ.

Also Read  ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಪಡಿತರ ಆಹಾರ ಪಡೆಯಲು ಸೂಚನೆ

                                                                   

 

 

error: Content is protected !!
Scroll to Top