ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 17.  ಇತ್ತೀಚೆಗಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದ, ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ.

ಕೆಲ ತಿಂಗಳ ಹಿಂದಷ್ಟೇ ದೇವಸ್ಥಾನದ ಜೀರ್ಣೋದ್ಧಾರ ಮಾಡಲಾಗಿತ್ತು. ಅಂದಾಜು 40 ಸಾವಿರಕ್ಕೂ ಅಧಿಕ ನಗದನ್ನು ಕಳ್ಳ ಕಳವು ಮಾಡಿದ್ದು, ಈ ಹಣವನ್ನು ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳ ಪರಾರಿಯಾಗಿದ್ದು, ಈತನ ಕಳ್ಳತನದ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

 

error: Content is protected !!

Join the Group

Join WhatsApp Group