ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 17. ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೋರ್ವನ ಕಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡವರನ್ನು ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬವರ ಮಗ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್(8) ಎಂದು ಗುರುತಿಸಲಾಗಿದೆ. ಬಾಲಕ ಶನಿವಾರದಂದು ಬೆಳಗಿನ ಶಾಲೆಗೆ ತೆರಳಲೆಂದು ವಾಹನಕ್ಕಾಗಿ ಕಾಯುತ್ತಾ ನಿಂತಿದ್ದಾಗ  ಶಾಲಾ ವಾಹನದ ಚಾಲಕ‌ ವಾಹನವನ್ನು ರಿವರ್ಸ್ ತೆಗೆಯುತಿದ್ದ. ಈ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ. ಘಟನೆಯಲ್ಲಿ ಬಾಲಕನ‌ ಕಾಲು ನಜ್ಜುಗುಜ್ಜಾಗಿದ್ದು, ಕೂಡಲೇ ಸ್ಥಳೀಯರು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಯನ್ನು ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಗುಂಡ್ಲುಪೇಟೆ ‌ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group