ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 17. ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯರವರು ತಕ್ಷಣವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ತನಿಖೆ ನಡೆಯುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವಂತೆ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

 

 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವನ್ನೂ ಕೂಡಾ ಪ್ರಶ್ನಿಸುವ ಭಂಡತನ ತೋರಬಹುದು  ಎಂದು ಹೇಳಿದ್ದಾರೆ. ರಾಜ್ಯಪಾಲರನ್ನು ಅನಾವಶ್ಯಕವಾಗಿ ಟೀಕೆ ಮಾಡಬಾರದು. ಅವರು ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆದೇ ನಿರ್ಧಾರ ಕೈಗೊಳ್ಳುತ್ತಾರೆ. ನಿಮಗೆ ಸರಿ ಇದ್ದಾಗ ಸಂವಿಧಾನ ಒಳ್ಳೆಯದು, ನಿಮ್ಮ ಮೇಲೆ ಆರೋಪ ಬಂದಾಗ ಸಂವಿಧಾನ ಸರಿಯಿಲ್ಲ ಎಂಬ ಕಾಂಗ್ರೆಸ್ ನಿಲುವು ಸರಿಯಿಲ್ಲ. ಸಿದ್ದರಾಮಯ್ಯರವರು ರಾಜಿನಾಮೆ ನೀಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಹುದೊಡ್ಡ ಪ್ರತಿಭಟನೆಯೇ ನಡೆಯಲಿದೆ ಎಂದು ಸುನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

error: Content is protected !!

Join the Group

Join WhatsApp Group