ಮಂಗಳೂರು ಬೆಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ

(ನ್ಯೂಸ್ ಕಡಬ) newskadaba.com ಹಾಸನ, ಆ. 18. ಸಕಲೇಶಪುರ ಹಾಗೂ ಬಾಳುಪೇಟೆ ನಡುವೆ ರೈಲ್ವೇ ಹಳಿಯ ಮೇಲೆ ಮತ್ತೆ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು – ಮಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಕಳೆದ ಎರಡು ವಾರಗಳಿಂದ ಇದೇ ಜಾಗದಲ್ಲಿ ರೈಲ್ವೇ ಹಳಿಗಳ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮತ್ತೆ ಮಣ್ಣು ಕುಸಿಯುತ್ತಿರುವುದರಿಂದಾಗಿ ಎಲ್ಲಾ ರೈಲುಗಳ ಸಂಚಾರ ನಿಷೇಧಿಸಲಾಗಿದೆ ಎಂದು ರೈಲ್ವೇ ಇಲಾಖೆಯು ಬುಲೆಟಿನ್ ಹೊರಡಿಸಿದೆ.

Also Read  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤‌ ಐವರು ಆರೋಪಿಗಳು ಎನ್ಐಎ ವಶಕ್ಕೆ

error: Content is protected !!
Scroll to Top