*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ          

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 19.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು, ಬಿದ್ದಿರುವ ಮಣ್ಣು ತೆರವು ಕಾರ್ಯ ಭರದಿಂದ ಸಾಗಿದೆ.

ಗುಡ್ಡ ಕುಸಿದಿದ್ದ ಜಾಗದಲ್ಲಿ ಮತ್ತೆ ಮಣ್ಣು ಕುಸಿದಿದ್ದು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ನಾಲ್ಕು ಐದು ಹಿಟಾಚಿ ಯಂತ್ರಗಳನ್ನು ಕಾಮಗಾರಿಗೆ ಬಳಸಲಾಗಿದೆ. ಮತ್ತಷ್ಟು ಮಣ್ಣು ಕುಸಿಯದಂತೆ ತಡೆಯಲು ಬೆಟ್ಟದ ಮೇಲಿನಿಂದ ಕೂಡ ಮಣ್ಣು ತೆರವುಗೊಳಿಸಲಾಗುತ್ತಿದೆ.

Also Read  ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪ್ರವಾಸ ➤ ಅಹವಾಲು ಸ್ವೀಕಾರ

 

error: Content is protected !!
Scroll to Top