ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 19. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್ ಎಂಬಾತನನ್ನು ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ವರದಿಯಾಗಿದೆ.

 

ಈತ ಹರೇಕಳ ಗ್ರಾಮದ ಕಡೆಂಜತೋಟ ನಿವಾಸಿ ಆಗಿದ್ದು, ಈತನ ವಿರುದ್ದ ಕೊಣಾಜೆ, ಉಳ್ಳಾಲ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣಾ ಪ್ರಕರಣಕ್ಕೆ ಸಂಬಂಧಿಸಿ ಈತನು ಸುಮಾರು 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು ಎನ್ನಲಾಗಿದೆ. ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರುಗಳಾದ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಧನ್ಯ ಎನ್ ನಾಯಕ್, ಕೊಣಾಜೆ ಠಾಣಾ ಪೊಲೀಸ್ ನಿರೀಕ್ಷಕ ರವೀಂದ್ರ ಸಿ.ಎಂ, ಪೊಲೀಸ್ ಉಪನಿರೀಕ್ಷಕ ನಾಗರಾಜ್ ಎಸ್, ಸಿಬ್ಬಂದಿಗಳಾದ ಎಚ್.ಸಿ ಮಹಮ್ಮದ್ ಶರೀಫ್, ಪಿಸಿಗಳಾದ ಸುರೇಶ್ ಹಾಗೂ ಪ್ರಶಾಂತ್ ರವರ ತಂಡ ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!

Join the Group

Join WhatsApp Group