ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ರಾಜ್ಯಪಾಲರ ನಿರ್ಧಾರದ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ.

 

ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. ಜೊತೆಗೆ ಇ-ಮೇಲ್‌ ಮೂಲಕವೂ ದೂರುಗಳ ಸುರಿಮಳೆಗೈಯ್ಯಲಾಗಿದೆ. ರಾಜ್ಯಪಾಲರು ರಾಜಕೀಯ ಕೈಗೊಂಬೆಯಂತೆ ವರ್ತಿಸಿದ್ದು, ನಿಯಮಬಾಹಿರವಾಗಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆ ರಾಜ್ಯಪಾಲರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್‌‍ ಕಾರ್ಯಕರ್ತರು ಆಗ್ರಹಿಸಿದ್ದಾರೆ.

error: Content is protected !!

Join the Group

Join WhatsApp Group