ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ  ಕಾರ್ಯಕ್ರಮವನ್ನು ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಸಮಿತಿ ಕೋಶಾಧಿಕಾರಿಯಾದ ಶ್ರೀ ಲಿಂಗಪ್ಪ ಜೆ. ಇವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಹಿನ್ನೆಲೆ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು. ತದನಂತರ ಶಾಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಮಾತಾಜಿ ಶ್ವೇತಾ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಸ್ವಾಗತಿಸಿ, ಏಳನೇ ತರಗತಿ ವಿದ್ಯಾರ್ಥಿ ಸಾಕ್ಷತ್ ವಂದಿಸಿದರು. ಮಾತಾಜಿ ಶಿಲ್ಪ ಇವರು ಕಾರ್ಯಕ್ರಮ ನಿರೂಪಿಸಿದರು.

error: Content is protected !!

Join WhatsApp Group

WhatsApp Share