ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ವೇಳೆ ಹೃದಯಾಘಾತ; ಕಾಂಗ್ರೆಸ್ ಕಾರ್ಯಕರ್ತ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19.  ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ನಡೆಸುವಂತೆ ಹೇಳಿರುವ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿರುವ ವೇಳೆಯಲ್ಲಿ ಹೃದಯಾಘಾತವುಂಟಾಗಿ ಕಾಂಗ್ರೆಸ್ ಕಾರ್ಯಕರ್ತರೋರ್ವರು ಮೃತಪಟ್ಟ ಘಟನೆ ನಡೆದಿದೆ.

 

ಮೃತರನ್ನು ಪಿ.ಕೆ.ರವಿಚಂದ್ರನ್ ಎಂದು ಗುರುತಿಸಲಾಗಿದೆ. ಸೋಮವಾರದಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ರವಿಚಂದ್ರನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group