ಆಲಂಕಾರು: ಕುಳಿತ ಸ್ಥಿತಿಯಲ್ಲೇ ಭದ್ರತಾ ಸಿಬ್ಬಂದಿ ಮೃತ್ಯು…!!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕರ್ತವ್ಯದಲ್ಲಿದ್ದಾಗಲೇ ಕುಳಿತ ಸ್ಥಿತಿಯಲ್ಲಿ ಭದ್ರತಾ ಸಿಬ್ಬಂದಿಯೋರ್ವರು ಮೃತಪಟ್ಟಿರುವ ಘಟನೆ ಅಲಂಕಾರಿನಲ್ಲಿ ನಡೆದಿದೆ.

 

ಮೃತಪಟ್ಟವರನ್ನು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಆಗಸ್ಟ್ 17ರಂದು ರಾತ್ರಿ 8 ಗಂಟೆಯ ವೇಳೆ ನೈಟ್ ಡ್ಯೂಟಿಗೆ ಹಾಜರಾಗಿದ್ದರು. ಆದರೆ ಮರುದಿನ ಸ್ಥಳೀಯರು ಬಂದು ನೋಡಿದಾಗ ಅವರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಗೊತ್ತಾಗಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಅಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಓ ಮನೋಹರ ಪ್ರಕಾಶ್ ಡಿ. ಅವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group