’ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ- ಸರಕಾರಿ ಪ್ರಾಯೋಜಿತ ಬೆದರಿಕೆಯೇ’        ಸಿ.ಟಿ. ರವಿ ಪ್ರಶ್ನೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ ಅಥವಾ ಸರಕಾರಿ ಪ್ರಾಯೋಜಿತ ಬೆದರಿಕೆಯೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಾಸಿಕ್ಯೂಶನ್‍ಗೆ ರಾಜ್ಯಪಾಲರು ಅನುಮತಿ ಕೊಟ್ಟದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ಷೇಪಿಸಿದರು.

Scroll to Top