ಕಾಡಾನೆ ದಾಳಿ- 150ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 21. ಕಾಡಾನೆ ದಾಳಿ ನಡೆಸಿದ ಪರಿಣಾಮ 150ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶಗೊಂಡಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ.

ಶಿರಾಡಿ ಗ್ರಾಮದ ತೆಕ್ಕನಾಟ್ ನಿವಾಸಿ ಟಿ.ಎ.ಥಾಮಸ್ ಎಂಬವರಿಗೆ ಸೇರಿದ ಕೃಷಿ ತೋಟಕ್ಕೆ ಕಾಡಾನೆ ನುಗ್ಗಿ 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನಾಶಗೊಳಿಸಿದೆ ಎನ್ನಲಾಗಿದೆ. ಈ ಭಾಗದಲ್ಲಿ ಕಾಡಾನೆಗಳು ಪದೇ ಪದೇ ಕೃಷಿ ತೋಟಕ್ಕೆ ದಾಳಿ ನಡೆಸಿ ಹಾನಿಗೊಳಿಸುತ್ತಿರುವುದು ಕೃಷಿಕರು ಆತಂಕಗೊಳ್ಳುವಂತೆ ಮಾಡಿದೆ. ಶೀಘ್ರವೇ ಆನೆಗಳನ್ನು ಅರಣ್ಯದೊಳಗೆ ಸ್ಥಳಾಂತರಿಸುವ ಮೂಲಕ ಹೆಚ್ಚಿನ ಹಾನಿಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

error: Content is protected !!

Join the Group

Join WhatsApp Group